ಕಾರ್ಕಳ : ಕೆಮ್ಮುವಿನಿಂದ ಬಳಲುತ್ತಿದ್ದ ಯುವಕ – ಕುಸಿದು ಬಿದ್ದು ಮೃತ್ಯು

Advertisement

ಕಾರ್ಕಳ, ಫೆ. 21 : ಮನೆಯಲ್ಲಿ ಕುರ್ಚಿಯಲ್ಲಿ ಕುಳಿತುಕೊಂಡಿದ್ದ ಯುವಕನೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಕಾರ್ಕಳದ ಯರ್ಲಪಾಡಿ ಎಂಬಲ್ಲಿ ನಡೆದಿದೆ. ಮೃತರನ್ನು ಯರ್ಲಪಾಡಿ ಗ್ರಾಮದ ಹೇಮಲತಾ ಎಂಬವರ ಮಗ ಸುಹೇಶ್(22) ಎಂದು ಗುರುತಿಸಲಾಗಿದೆ.

Advertisement

ಕಳೆದ 15 ದಿನಗಳಿಂದ ಕೆಮ್ಮುವಿನಿಂದ ಬಳಲುತ್ತಿದ್ದ ಇವರು ಔಷಧಿ ಸೇವಿಸುತ್ತಿದ್ದರು. ಫೆ.19ರಂದು ಮಧ್ಯಾಹ್ನ ಮನೆಯ ಡೈನಿಂಗ್ ರೂಮ್‌ನ ಕುರ್ಚಿಯಲ್ಲಿ ಕುಳಿತು ಕೊಂಡಿದ್ದ ಸುಹೇಶ್, ಒಮ್ಮೆಲೆ ಬೊಬ್ಬೆ ಹಾಕುತ್ತಾ ಕೆಳಗೆ ಬಿದ್ದರೆನ್ನಲಾಗಿದೆ.

Advertisement

ಬಳಿಕ ನರಳಾಡಿ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಕೂಡಲೇ ಕಾರ್ಕಳದ ಖಾಸಗಿ ಆಸ್ಫತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಪರೀಕ್ಷಿಸಿದ ವೈದ್ಯರು ಸುಹೇಶ್ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ