ಮಂಗಳೂರು, ಜೂ. 10 : ಇಲ್ಲಿನ ಜೋಕಟ್ಟೆಯಲ್ಲಿ ಯುವಕನೋರ್ವನ ಮೃತದೇಹ ಬುಧವಾರ ಬೆಳಗ್ಗೆ ಪತ್ತೆಯಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನೆಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.
ಎಂಆರ್ ಪಿಎಲ್ ನಿಂದ ಸುರತ್ಕಲ್ ತೆರಳುವ ರಸ್ತೆಯಲ್ಲಿನ ಜೋಕಟ್ಟೆ ತೆರಳುವ ಸಣ್ಣ ಮೇಲ್ಸೇತುವೆ ಬಳಿಯ ಚರಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹದಿಂದ ಒಂದೂವರೆ ಮೀಟರ್ ದೂರದಲ್ಲಿರುವ ಮನೆಯೊಂದರ ಗೇಟ್ ಬಳಿ ರಕ್ತದ ಕಲೆಗಳು ಪತ್ತೆಯಾಗಿದ್ದು, ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.


