ಕಡಬ : ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರುಪಾಲು

ಕಡಬ, ಮೇ. 09 : ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಸ್ನಾನಕ್ಕಿಳಿದ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ(15) ಹಾಗೂ ಸುನೀತಾ(21) ಎಂದು ಗುರುತಿಸಲಾಗಿದೆ. ರಜೆ ಇರುವುದರಿಂದ ಸ್ನೇಹಿತರ ತಂಡದೊಂದಿಗೆ ನದಿಗೆ ಆಗಮಿಸಿದ್ದ ಐವರು ವಿದ್ಯಾರ್ಥಿನಿಯರು ಸ್ನಾನಕ್ಕಾಗಿ ನೀರಿಗೆ ಇಳಿದಿದ್ದು, ಈ ವೇಳೆ ಇಬ್ಬರು ವಿದ್ಯಾರ್ಥಿನಿಯರು ನೀರಿನ ಆಳ ತಿಳಿಯದೆ ಮುಳುಗತೊಡಗಿದ್ದಾರೆ.

ಜೊತೆಯಲ್ಲಿದ್ದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗದೆ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರ ಸಹಕಾರದಿಂದ ಮೃತದೇಹಗಳನ್ನು ಮೇಲಕ್ಕೆತ್ತಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.